EPISODE · Feb 26, 2025 · 12 MIN
ಕಂತು 2: ಭಜ ಗೋವಿಂದಂ (ಮೋಹಮುದ್ಗರ) Bhaja Govindam - ಆದಿ ಶಂಕರ ಮತ್ತು ಶಿಷ್ಯರು
from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit
👍 Like it? ...... Subscribe and Share! 👁️ Watch it 🕮 Read it 👂 Listen it📧 Subscribe to our newsletter"ಭಜ ಗೋವಿಂದಂ" ಎಂದೇ ಪ್ರಸಿದ್ಧವಾದ, ಆದಿ ಶಂಕರ ರಚಿತ "ಮೋಹಮುದ್ಗರ", ಮಾಯೆಯ ನೆತ್ತಿಗೆ ನೇರ ಗದಾಪ್ರಹಾರ ಮಾಡಿ ನಮ್ಮ ನಿಜ ಸ್ವರೂಪದತ್ತ ದಾರಿ ತೋರಿಸುವ ಕೃತಿ. ಬಾಳಿನ ಗುರಿ ಏನು? ಗಳಿಕೆಯ ಆಸೆ ಏಕೆ? ಸತ್ಯ ಯಾವುದು, ಮಿಥ್ಯೆ ಯಾವುದು? ಪ್ರಾಪಂಚಿಕ ಹೊರ ತಿಳಿವೋ, ತನ್ನ ಒಳ ತಿಳಿವೋ? ಇವೆಲ್ಲವನ್ನೂ ನೇರವಾಗಿ ಉತ್ತರಿಸುತ್ತ ಶಂಕರರು, ಸಂಸಾರದ ಪೊಳ್ಳುತನ, ಮನುಷ್ಯನ ಡಂಬಾಚಾರ, ವ್ಯರ್ಥ ಹೋರಾಟಗಳನ್ನು ಬಯಲಿಗೆ ಎಳೆಯುತ್ತಾರೆ. ನೈಜವನ್ನು ಕಂಡುಕೊಳ್ಳಲು ಅನುಸರಿಸಬೇಕಾದ ವೇದಾಂತ ತತ್ವಗಳನ್ನು ಇಲ್ಲಿ ಬಿಗಿಯಾಗಿ ಹೆಣೆದಿದ್ದಾರೆ. ಪಲ್ಲವಿ ಎಂದು ಗಣಿಸಲಾದ ಮೊದಲ ನುಡಿ ಮತ್ತು ಮುಂದಿನ ಹನ್ನೆರಡು ನುಡಿಗಳನ್ನು ಸ್ವತಃ ಶಂಕರರು ರಚಿಸಿದ್ದಾರೆ. ಇವನ್ನು "ದ್ವಾದಶ ಮಂಜರಿಕಾ ಸ್ತೋತ್ರ" (ಹನ್ನೆರಡು ಹೂಗಳ ಗೊಂಚಲು) ಎಂದು ಗುರುತಿಸಲಾಗಿದೆ. ಇವುಗಳಿಂದ ಸ್ಫೂರ್ತಿಗೊಂಡ ಅವರ ಹದಿನಾಲ್ಕು ಶಿಷ್ಯರು ಒಂದೊಂದು ನುಡಿಗಳನ್ನು ಸೇರಿಸಿದರು; ಅದೇ ಚತುರ್ದಶ ಮಂಜರಿಕಾ ಸ್ತೋತ್ರ. ಮತ್ತೆ ನಾಲ್ಕು ನುಡಿಗಳನ್ನು ಶಂಕರರು ರಚಿಸಿ ಒಟ್ಟು ೩೧ ನುಡಿಗಳ ಮೋಹ ಮುದ್ಗರವನ್ನು ಪೂರ್ತಿಗೊಳಿಸಿದರು.ಇದರ ಸರಳ ಕನ್ನಡ ಅನುವಾದ ಇಲ್ಲಿದೆ ಪದ್ಯರೂಪದಲ್ಲಿ.ಕಂತು ೧: ನುಡಿ ೧ – ೧೩, ಪಲ್ಲವಿಯೊಡನೆ ಹನ್ನೆರಡು ಹೂಗಳ ಗೊಂಚಲುಕಂತು ೨: ನುಡಿ ೧೪ – ೨೭ಚತುರ್ದಶ ಮಂಜರಿಕಾಕಂತು ೩: ನುಡಿ ೨೮ – ೩೧ಉಪಸಂಹಾರಕನ್ನಡಕ್ಕೆನೆನೆ ಗೋವಿಂದನವಿಶ್ವೇಶ್ವರ ದೀಕ್ಷಿತ----ಕೆಲವರು ಕೆಲವು ಪದಗಳ ಅನುವಾದದ ಬಗ್ಗೆ ಕೇಳಿದ್ದೀರಿ. ನನ್ನ ವಿಚಾರ ಹೀಗಿದೆ:ಡುಕೃಂಕರಣೇ:ಸಾಮಾನ್ಯವಾಗಿ ಇದನ್ನು (ಇಡಿಯ) ವ್ಯಾಕರಣ ಎಂದು ತಿಳಿಯಲಾಗಿದೆ. ಭಾಷೆ, ಆಲೋಚನೆಗಳು ಮತ್ತು ಜ್ಞಾನವನ್ನು ಹಿಡಿದಿಡುವ ಮತ್ತು ಸಂವಹಿಸುವ ಸಾಧನವಾದರೆ, ವ್ಯಾಕರಣವು ಹಾಗೆ ಮಾಡಲು ಒಂದು ಚೌಕಟ್ಟು ಮತ್ತು ನಿಯಮಗಳನ್ನು ಒದಗಿಸುತ್ತದೆ. ಆದಾಗ್ಯೂ ನಿಯಮಗಳೇ ನಿಜವಾದ ಜ್ಞಾನವಲ್ಲ. ಜ್ಞಾನ ಸಂವಹನೆಗೆ ಅಗತ್ಯವಿದ್ದರೂ ವ್ಯಾಕರಣವೇ (syntax)ಗುರಿಯಲ್ಲ. ವ್ಯಾಕರಣ (syntax)ಮೇಲ್ಮೈ ಜ್ಞಾನವಾದರೆ, ಅರ್ಥ (symantics)ಆಂತರಿಕ ನೈಜ ಜ್ಞಾನವಾಗಿದೆ. ರೂಪ(form)ವನ್ನೆ ಸ್ವರೂಪ(substance)ಎಂದು ತಿಳಿಯುವುದು ಮೌಢ್ಯ. ಶಂಕರರು, "ಭಜ ಗೋವಿಂದಂ" ರಚನೆಯ ಉದ್ದಕ್ಕೂ, ಆಚರಣೆಗಳು, ಭೌತಿಕತೆ, ನಡವಳಿಕೆಗಳು, ಮತ್ತು ಜೀವನ ನಿಯಮಗಳು ಎಲ್ಲವನ್ನೂ ಮೀರಿ, ಅವುಗಳ ಟೊಳ್ಳುತನವನ್ನು ಕಂಡು, ನಮ್ಮ ನೈಜ ಸ್ವರೂಪವನ್ನು ಅರಿತುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳುತ್ತಾರೆ. ಆ ಭಾವದಲ್ಲಿ, "ಒಳ ತಿಳಿವು" ಆಂತರಿಕ ಮತ್ತು ನಿಜವಾದ ಜ್ಞಾನವಾದರೆ "ಡುಕೃಂಕರಣೆ"ಯನ್ನು "ಹೊರ ತಿಳಿವು" ಎಂದು ಅನುವಾದಿಸಿದ್ದೇನೆ.ಈ ಕೆಲವು ಕೊಂಡಿಗಳು ತಿಳಿದುಕೊಳ್ಳಲು ಸಹಕಾರಿಯಾಗಬಹುದು:https://nivedita2015.wordpress.com/2015/09/25/grammatical-aspects-in-bhaja-govindam-verse-1/https://www.reddit.com/r/sanskrit/comments/5z3e1m/translating_dukrjkarane_any_hints/ಮೂಢಮತೇ: ಇದಕ್ಕೆ ಕೆಲವರು "ಮಂದಮತಿ" ಅಥವ ಕೇವಲ "ಮನವೇ" ಎನ್ನಬಹುದಲ್ಲ ಎಂದಿದ್ದಾರೆ. ಮೊದಲನೆಯದಾಗಿ, ಇಲ್ಲಿ ಮೂಢ ಎನ್ನುವುದಕ್ಕೆ ಅಜ್ಞ/ತಿಳಿಗೇಡಿ ಎನ್ನುವ ಸಾಮಾನ್ಯ ಅರ್ಥ ಇದೆ. ಭ್ರಮೆಗೊಳಗಾದವ, ಮರುಳ, ಮಂಕು ಹಿಡಿದವ ಎನ್ನುವದು ಇಲ್ಲಿ ಔಚಿತ್ಯಪೂರ್ಣವಾಗಿದೆ. ಅಂದರೆ ಮಾಯೆಯ ಜಾಲದಲ್ಲಿ ಸಿಕ್ಕು, ತನ್ನ ನಿಜ ಸ್ವರೂಪವನ್ನು ಅರಿಯದೆ, ಬೇರೆಯದಕ್ಕೆ ತಾ ಎಂದು ಅಂಟಿಕೊಂಡಿರುವವ ಎನ್ನುವುದು ಶಂಕರರ ತಾತ್ವಿಕ ವಿಚಾರಕ್ಕೆ ಹೊಂದಿಕೆಯಾಗುತ್ತದೆ. "ಮತಿ" ಎಂದರೆ ವಿವೇಚನೆಯ ಶಕ್ತಿ ಉಳ್ಳದ್ದು; ಮನಸ್ಸು ಎನ್ನುವುದಕ್ಕಿಂತ ವಿಶಿಷ್ಟವಾದದ್ದು. ವಿವೇಕ ಚೂಡಾಮಣಿಯ ಕರ್ತೃ ಆದ ಶಂಕರರು ಇದನ್ನು ಉದ್ದೇಶಪೂರ್ವಕ ಉಪಯೋಗಿಸಿದ್ದಾರೆ. ಆದ್ದರಿಂದ ಇದನ್ನು "ಮನ" ಎಂದು ಬದಲಾಯಿಸುವುದು ತಕ್ಕುದಲ್ಲ ಎನಿಸುತ್ತದೆ. ಮೇಲಾಗಿ, ಮೂಲದಲ್ಲಿ ಇರುವ ಮೂಢ ಪದವನ್ನು ಬಿಟ್ಟುಬಿಡುವುದೂ ಸರಿ ಅಲ್ಲ; ಅನುವಾದ ಅಂದರೆ (ಪದಶಃ ಅಲ್ಲದಿದ್ದರೂ) ಮೂಲಕ್ಕೆ ಆದಷ್ಟು ಬದ್ಧವಾಗಿರಬೇಕು.ಎರಡನೆಯದಾಗಿ, ಮಂದ ಎನ್ನುವುದು ಮೂಢ ಪದಕ್ಕೆ ಅನ್ವರ್ಥ ಪದ ಆದರೂ ಬೇರೆ ಅರ್ಥವೂ (slow, dull, dim...) ಬರಬಹುದು, ಅಲ್ಲದೆ, ಒಂದು ಸಂಸ್ಕೃತ ಪದಕ್ಕೆ ಬದಲಾಗಿ (ಕಾರಣ ಇಲ್ಲದೆ) ಇನ್ನೊಂದು ಸಂಸ್ಕೃತ ಪದ ಹಾಕಿದರೆ ಅದಕ್ಕೆ ಕನ್ನಡ ಅನುವಾದ ಏಕೆ ಅನ್ನಬೇಕು?--ಚತುರ್ದಶ ಮಂಜರಿಕಾ00:04 ೧ ಭಜ ಗೋವಿಂದಂ ಭಜ ಗೋವಿಂದಂ00:53 ೨ ಮೂಢ ಜಹೀಹಿ ಧನಾಗಮತೃಷ್ಣಾಂ01:45 ೩ ನಾರೀಸ್ತನಭರನಾಭೀದೇಶಂ02:26 ೪ ನಲಿನೀದಲಗತಜಲಮತಿತರಲಂ03:10 ೫ ಯಾವದ್ವಿತ್ತೋಪಾರ್ಜನಸಕ್ತಃ03:55 ೬ ಯಾವತ್ ಪವನೋ ನಿವಸತಿ ದೇಹೇ04:40 ೭ ಬಾಲಸ್ತಾವತ್ ಕ್ರೀಡಾಸಕ್ತಃ05:25 ೮ ಕಾ ತೇ ಕಾಂತಾ? ಕಸ್ತೇ ಪುತ್ರಃ?06:10 ೯ ಸತ್ಸಂಗತ್ವೇ ನಿಸ್ಸಂಗತ್ವಂ06:49 ೧೦ ವಯಸಿ ಗತೇ ಕಃ ಕಾಮವಿಕಾರಃ?07:29 ೧೧ ಮಾ ಕುರು ಧನ ಜನ ಯೌವನ ಗರ್ವಂ08:09 ೧೨ ದಿನಯಾಮಿನ್ಯೌ, ಸಾಯಂ ಪ್ರಾತಃ08:54 ೧೩ ಕಾ ತೇ ಕಾಂತಾ ಧನಗತಚಿಂತಾ?09:40 ಕೃತಜ್ಞತೆ, ಸಂಪರ್ಕ
What this episode covers
👍 Like it? ...... Subscribe and Share! 👁️ Watch it 🕮 Read it 👂 Listen it📧 Subscribe to our newsletter"ಭಜ ಗೋವಿಂದಂ" ಎಂದೇ ಪ್ರಸಿದ್ಧವಾದ, ಆದಿ ಶಂಕರ ರಚಿತ "ಮೋಹಮುದ್ಗರ", ಮಾಯೆಯ ನೆತ್ತಿಗೆ ನೇರ ಗದಾಪ್ರಹಾರ ಮಾಡಿ ನಮ್ಮ ನಿಜ ಸ್ವರೂಪದತ್ತ ದಾರಿ ತೋರಿಸುವ ಕೃತಿ. ಬಾಳಿನ ಗುರಿ ಏನು? ಗಳಿಕೆಯ ಆಸೆ ಏಕೆ? ಸತ್ಯ ಯಾವುದು, ಮಿಥ್ಯೆ ಯಾವುದು? ಪ್ರಾಪಂಚಿಕ ಹೊರ ತಿಳಿವೋ, ತನ್ನ ಒಳ ತಿಳಿವೋ? ಇವೆಲ್ಲವನ್ನೂ ನೇರವಾಗಿ ಉತ್ತರಿಸುತ್ತ ಶಂಕರರು, ಸಂಸಾರದ ಪೊಳ್ಳುತನ, ಮನುಷ್ಯನ ಡಂಬಾಚಾರ, ವ್ಯರ್ಥ ಹೋರಾಟಗಳನ್ನು ಬಯಲಿಗೆ ಎಳೆಯುತ್ತಾರೆ. ನೈಜವನ್ನು ಕಂಡುಕೊಳ್ಳಲು ಅನುಸರಿಸಬೇಕಾದ ವೇದಾಂತ ತತ್ವಗಳನ್ನು ಇಲ್ಲಿ ಬಿಗಿಯಾಗಿ ಹೆಣೆದಿದ್ದಾರೆ. ಪಲ್ಲವಿ ಎಂದು ಗಣಿಸಲಾದ ಮೊದಲ ನುಡಿ ಮತ್ತು ಮುಂದಿನ ಹನ್ನೆರಡು ನುಡಿಗಳನ್ನು ಸ್ವತಃ ಶಂಕರರು ರಚಿಸಿದ್ದಾರೆ. ಇವನ್ನು "ದ್ವಾದಶ ಮಂಜರಿಕಾ ಸ್ತೋತ್ರ" (ಹನ್ನೆರಡು ಹೂಗಳ ಗೊಂಚಲು) ಎಂದು ಗುರುತಿಸಲಾಗಿದೆ. ಇವುಗಳಿಂದ ಸ್ಫೂರ್ತಿಗೊಂಡ ಅವರ ಹದಿನಾಲ್ಕು ಶಿಷ್ಯರು ಒಂದೊಂದು ನುಡಿಗಳನ್ನು ಸೇರಿಸಿದರು; ಅದೇ ಚತುರ್ದಶ ಮಂಜರಿಕಾ ಸ್ತೋತ್ರ. ಮತ್ತೆ ನಾಲ್ಕು ನುಡಿಗಳನ್ನು ಶಂಕರರು ರಚಿಸಿ ಒಟ್ಟು ೩೧ ನುಡಿಗಳ ಮೋಹ ಮುದ್ಗರವನ್ನು ಪೂರ್ತಿಗೊಳಿಸಿದರು.ಇದರ ಸರಳ ಕನ್ನಡ ಅನುವಾದ ಇಲ್ಲಿದೆ ಪದ್ಯರೂಪದಲ್ಲಿ.ಕಂತು ೧: ನುಡಿ ೧ – ೧೩, ಪಲ್ಲವಿಯೊಡನೆ ಹನ್ನೆರಡು ಹೂಗಳ ಗೊಂಚಲುಕಂತು ೨: ನುಡಿ ೧೪ – ೨೭ಚತುರ್ದಶ ಮಂಜರಿಕಾಕಂತು ೩: ನುಡಿ ೨೮ – ೩೧ಉಪಸಂಹಾರಕನ್ನಡಕ್ಕೆನೆನೆ ಗೋವಿಂದನವಿಶ್ವೇಶ್ವರ ದೀಕ್ಷಿತ----ಕೆಲವರು ಕೆಲವು ಪದಗಳ ಅನುವಾದದ ಬಗ್ಗೆ ಕೇಳಿದ್ದೀರಿ. ನನ್ನ ವಿಚಾರ ಹೀಗಿದೆ:ಡುಕೃಂಕರಣೇ:ಸಾಮಾನ್ಯವಾಗಿ ಇದನ್ನು (ಇಡಿಯ) ವ್ಯಾಕರಣ ಎಂದು ತಿಳಿಯಲಾಗಿದೆ. ಭಾಷೆ, ಆಲೋಚನೆಗಳು ಮತ್ತು ಜ್ಞಾನವನ್ನು ಹಿಡಿದಿಡುವ ಮತ್ತು ಸಂವಹಿಸುವ ಸಾಧನವಾದರೆ, ವ್ಯಾಕರಣವು ಹಾಗೆ ಮಾಡಲು ಒಂದು ಚೌಕಟ್ಟು ಮತ್ತು ನಿಯಮಗಳನ್ನು ಒದಗಿಸುತ್ತದೆ. ಆದಾಗ್ಯೂ ನಿಯಮಗಳೇ ನಿಜವಾದ ಜ್ಞಾನವಲ್ಲ. ಜ್ಞಾನ ಸಂವಹನೆಗೆ ಅಗತ್ಯವಿದ್ದರೂ ವ್ಯಾಕರಣವೇ (syntax)ಗುರಿಯಲ್ಲ. ವ್ಯಾಕರಣ (syntax)ಮೇಲ್ಮೈ ಜ್ಞಾನವಾದರೆ, ಅರ್ಥ (symantics)ಆಂತರಿಕ ನೈಜ ಜ್ಞಾನವಾಗಿದೆ. ರೂಪ(form)ವನ್ನೆ ಸ್ವರೂಪ(substance)ಎಂದು ತಿಳಿಯುವುದು ಮೌಢ್ಯ. ಶಂಕರರು, "ಭಜ ಗೋವಿಂದಂ" ರಚನೆಯ ಉದ್ದಕ್ಕೂ, ಆಚರಣೆಗಳು, ಭೌತಿಕತೆ, ನಡವಳಿಕೆಗಳು, ಮತ್ತು ಜೀವನ ನಿಯಮಗಳು ಎಲ್ಲವನ್ನೂ ಮೀರಿ, ಅವುಗಳ ಟೊಳ್ಳುತನವನ್ನು ಕಂಡು, ನಮ್ಮ ನೈಜ ಸ್ವರೂಪವನ್ನು ಅರಿತುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳುತ್ತಾರೆ. ಆ ಭಾವದಲ್ಲಿ, "ಒಳ ತಿಳಿವು" ಆಂತರಿಕ ಮತ್ತು ನಿಜವಾದ ಜ್ಞಾನವಾದರೆ "ಡುಕೃಂಕರಣೆ"ಯನ್ನು "ಹೊರ ತಿಳಿವು" ಎಂದು ಅನುವಾದಿಸಿದ್ದೇನೆ.ಈ ಕೆಲವು ಕೊಂಡಿಗಳು ತಿಳಿದುಕೊಳ್ಳಲು ಸಹಕಾರಿಯಾಗಬಹುದು:https://nivedita2015.wordpress.com/2015/09/25/grammatical-aspects-in-bhaja-govindam-verse-1/https://www.reddit.com/r/sanskrit/comments/5z3e1m/translating_dukrjkarane_any_hints/ಮೂಢಮತೇ: ಇದಕ್ಕೆ ಕೆಲವರು "ಮಂದಮತಿ" ಅಥವ ಕೇವಲ "ಮನವೇ" ಎನ್ನಬಹುದಲ್ಲ ಎಂದಿದ್ದಾರೆ. ಮೊದಲನೆಯದಾಗಿ, ಇಲ್ಲಿ ಮೂಢ ಎನ್ನುವುದಕ್ಕೆ ಅಜ್ಞ/ತಿಳಿಗೇಡಿ ಎನ್ನುವ ಸಾಮಾನ್ಯ ಅರ್ಥ ಇದೆ. ಭ್ರಮೆಗೊಳಗಾದವ, ಮರುಳ, ಮಂಕು ಹಿಡಿದವ ಎನ್ನುವದು ಇಲ್ಲಿ ಔಚಿತ್ಯಪೂರ್ಣವಾಗಿದೆ. ಅಂದರೆ ಮಾಯೆಯ ಜಾಲದಲ್ಲಿ ಸಿಕ್ಕು, ತನ್ನ ನಿಜ ಸ್ವರೂಪವನ್ನು ಅರಿಯದೆ, ಬೇರೆಯದಕ್ಕೆ ತಾ ಎಂದು ಅಂಟಿಕೊಂಡಿರುವವ ಎನ್ನುವುದು ಶಂಕರರ ತಾತ್ವಿಕ ವಿಚಾರಕ್ಕೆ ಹೊಂದಿಕೆಯಾಗುತ್ತದೆ. "ಮತಿ" ಎಂದರೆ ವಿವೇಚನೆಯ ಶಕ್ತಿ ಉಳ್ಳದ್ದು; ಮನಸ್ಸು ಎನ್ನುವುದಕ್ಕಿಂತ ವಿಶಿಷ್ಟವಾದದ್ದು. ವಿವೇಕ ಚೂಡಾಮಣಿಯ ಕರ್ತೃ ಆದ ಶಂಕರರು ಇದನ್ನು ಉದ್ದೇಶಪೂರ್ವಕ ಉಪಯೋಗಿಸಿದ್ದಾರೆ. ಆದ್ದರಿಂದ ಇದನ್ನು "ಮನ" ಎಂದು ಬದಲಾಯಿಸುವುದು ತಕ್ಕುದಲ್ಲ ಎನಿಸುತ್ತದೆ. ಮೇಲಾಗಿ, ಮೂಲದಲ್ಲಿ ಇರುವ ಮೂಢ ಪದವನ್ನು ಬಿಟ್ಟುಬಿಡುವುದೂ ಸರಿ ಅಲ್ಲ; ಅನುವಾದ ಅಂದರೆ (ಪದಶಃ ಅಲ್ಲದಿದ್ದರೂ) ಮೂಲಕ್ಕೆ ಆದಷ್ಟು ಬದ್ಧವಾಗಿರಬೇಕು.ಎರಡನೆಯದಾಗಿ, ಮಂದ ಎನ್ನುವುದು ಮೂಢ ಪದಕ್ಕೆ ಅನ್ವರ್ಥ ಪದ ಆದರೂ ಬೇರೆ ಅರ್ಥವೂ (slow, dull, dim...) ಬರಬಹುದು, ಅಲ್ಲದೆ, ಒಂದು ಸಂಸ್ಕೃತ ಪದಕ್ಕೆ ಬದಲಾಗಿ (ಕಾರಣ ಇಲ್ಲದೆ) ಇನ್ನೊಂದು ಸಂಸ್ಕೃತ ಪದ ಹಾಕಿದರೆ ಅದಕ್ಕೆ ಕನ್ನಡ ಅನುವಾದ ಏಕೆ ಅನ್ನಬೇಕು?--ಚತುರ್ದಶ ಮಂಜರಿಕಾ00:04 ೧ ಭಜ ಗೋವಿಂದಂ ಭಜ ಗೋವಿಂದಂ00:53 ೨ ಮೂಢ ಜಹೀಹಿ ಧನಾಗಮತೃಷ್ಣಾಂ01:45 ೩ ನಾರೀಸ್ತನಭರನಾಭೀದೇಶಂ02:26 ೪ ನಲಿನೀದಲಗತಜಲಮತಿತರಲಂ03:10 ೫ ಯಾವದ್ವಿತ್ತೋಪಾರ್ಜನಸಕ್ತಃ03:55 ೬ ಯಾವತ್ ಪವನೋ ನಿವಸತಿ ದೇಹೇ04:40 ೭ ಬಾಲಸ್ತಾವತ್ ಕ್ರೀಡಾಸಕ್ತಃ05:25 ೮ ಕಾ ತೇ ಕಾಂತಾ? ಕಸ್ತೇ ಪುತ್ರಃ?06:10 ೯ ಸತ್ಸಂಗತ್ವೇ ನಿಸ್ಸಂಗತ್ವಂ06:49 ೧೦ ವಯಸಿ ಗತೇ ಕಃ ಕಾಮವಿಕಾರಃ?07:29 ೧೧ ಮಾ ಕುರು ಧನ ಜನ ಯೌವನ ಗರ್ವಂ08:09 ೧೨ ದಿನಯಾಮಿನ್ಯೌ, ಸಾಯಂ ಪ್ರಾತಃ08:54 ೧೩ ಕಾ ತೇ ಕಾಂತಾ ಧನಗತಚಿಂತಾ?09:40 ಕೃತಜ್ಞತೆ, ಸಂಪರ್ಕ
NOW PLAYING
ಕಂತು 2: ಭಜ ಗೋವಿಂದಂ (ಮೋಹಮುದ್ಗರ) Bhaja Govindam - ಆದಿ ಶಂಕರ ಮತ್ತು ಶಿಷ್ಯರು
No transcript for this episode yet
Similar Episodes
Mar 26, 2026 ·1m
Mar 19, 2026 ·34m
Feb 18, 2026 ·11m
Feb 11, 2026 ·45m